30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ನಡ : ಸರಕಾರಿ ಪ್ರೌಢಶಾಲೆ ನಡ ಪ್ರಸಕ್ತ 2023-24 ನೇ ಸಾಲಿನಲ್ಲಿ ಒಟ್ಟು 138 ವಿದ್ಯಾರ್ಥಿಗಳಿರುವ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಗಣಿತ, ಹಿಂದಿ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಪ್ರಯೋಗಶಾಲೆ ಮತ್ತು ಸ್ಮಾರ್ಟ್ ಕ್ಲಾಸ್ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ನವೀನತೆಯ ಶಿಕ್ಷಣ ನೀಡುತ್ತಿರುವ ಮಾದರಿ ಸರಕಾರಿ ಶಾಲೆಯಲ್ಲಿ ಮಾ. 9 ರಂದು ಸಾರಸ್ವತ ಲರ್ನಿಂಗ್ ಫೌಂಡೇಶನ್ USA ಕ್ಯಾಲಿಪೋರ್ನಿಯಾ ಇವರ ವತಿಯಿಂದ ಶಾಲೆಯಲ್ಲಿ ಕಲಿಯುತ್ತಿರುವ ಪ್ರತೀ ವಿದ್ಯಾರ್ಥಿಗೆ ತಲಾ ವಿದ್ಯಾರ್ಥಿ ವೇತನ 1750/ (ಸಾವಿರದ ಏಳುನೂರ ಐವತ್ತು) ರೂ ನಂತೆ ವಿತರಿಸಲಾಯಿತು. ಹಾಗೂ ಮೂವರು ಅಡುಗೆ ಸಿಬಂದಿಯವರಿಗೆ ತಲಾ 3000 ದಂತೆ ಸಹಾಯ ಧನವನ್ನು ವಿತರಿಸಲಾಯಿತು.

ನಡ ಪ್ರೌಢಶಾಲೆಯ ನಿವೃತ್ತ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಜಾಹ್ನವಿ ಕೆ ಎಸ್ ಇವರ ಸಹೋದರರಾಗಿರುವ ಕೆ ನರೇಂದ್ರನಾಥ್, ವ್ಯವಸ್ಥಾಪಕರು ಸಾರಸ್ವತ ಲರ್ನಿಂಗ್ ಫೌಂಡೇಶನ್ ಇವರು ಸತತ 5 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡುತ್ತಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿದ್ದಾರೆ. ಈ ಸಂದರ್ಭ ಶ್ರೀಮತಿ ಜಾಹ್ನವಿ ಕೆ ಎಸ್ ನಿವೃತ್ತ ಪ್ರಥಮ ದರ್ಜೆ ಸಹಾಯಕರು, ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಚೆಕ್ ಮೂಲಕ ವಿದ್ಯಾರ್ಥಿ ವೇತನ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ‌ ಬಾಬು ಡಿ ಸಾರಸ್ವತ ಲರ್ನಿಂಗ್ ಫೌಂಡೇಶನ್ ಸಂಸ್ಥೆಯ ವ್ಯವಸ್ಥಾಪಕರಿಗೆ ಹಾಗೂ ಈ ವಿದ್ಯಾರ್ಥಿ ವೇತನದ ರೂವಾರಿಗಳಾದ ಶ್ರೀಮತಿ ಜಾಹ್ನವಿ ಕೆ ಎಸ್ ಧನ್ಯವಾದವಿತ್ತರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya
error: Content is protected !!