23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳ ಶಿಬಿರವನ್ನು ಫೆ.29ರಿಂದ ಮಾ.6ರವರೆಗೆ ಹಮ್ಮಿಕೊಳ್ಳಲಾಗಿತ್ತು. ಶಿಬಿರಾರ್ಥಿಗಳು ಸಿಯೋನ್ ಆಶ್ರಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಿರ್ವಹಿಸುವುದರೊಂದಿಗೆ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಆಶ್ರಮನಿವಾಸಿಗಳನ್ನು ಮನರಂಜಿಸಿದರು.

ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ರಾಧಾಕೃಷ್ಣ ಹೆಚ್.ಬಿ. ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಪ್ರೋ.ಹರಿಪ್ರಸಾದ್ ಬಿ. ಶೆಟ್ಟಿ, ಯತೀಶ್ ಎಂ. ಶೆಟ್ಟಿ, ಪ್ರವೀಣ್ ಗಟ್ಟಿ ಬಸ್ತಿಕೋಡಿ, ಉದಯಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್, ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಮತ್ತು ಸುಭಾಷ್ ಯು.ಪಿ., ಮ್ಯಾನೇಜರ್ ಶ್ರೀಮತಿ ಸಂಧ್ಯಾ ಸುಭಾಷ್, ಕಾಲೇಜಿನ ಪ್ರಾದ್ಯಾಪಕರುಗಳು ಉಪಸ್ಥಿತರಿದ್ದರು. ಶಿಬಿರದ ಮುಂದಾಳತ್ವವನ್ನು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಖಾರಿಗಳಾದ ಡಾ.ಮೇರಿ ಎಂ.ಜೆ. ಹಾಗೂ ಉದಯ್ ಕುಮರ್ ಇವರು ವಹಿಸಿಕೊಂಡಿದ್ದರು.

Related posts

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya
error: Content is protected !!