30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಉಜಿರೆ :ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಡಾಟ್ ಮಂಡಲ ಆರ್ಟ್ ನಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ ಹಾಗು ಇನ್ನಿತರ ಚಿತ್ರಕಲಾ ಪ್ರದರ್ಶನದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡ ಬೆಳ್ತಂಗಡಿಯ ಲಾಯಿಲ ಗ್ರಾಮದ ಕು. ಸುರಕ್ಷ ಆಚಾರ್ಯ ಮಾತನಾಡುತ್ತಾ ಮಹಿಳೆಯು ಕುಟುಂಬದ ಆಧಾರಸ್ತಂಭ. ಸಮಾಜದಲ್ಲಿ ಹೆಣ್ಣು ತಾಯಿಯಾಗಿ, ಮಗಳಾಗಿ, ಸಹೋದರಿಯಾಗಿ, ಹೆಂಡತಿಯಾಗಿ ಪಾತ್ರ ನಿರ್ವಹಿಸುವುದರ ಜೊತೆಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಂಡು ಸ್ವತಂತ್ರಳಾಗಿ ಜೀವನ ನಡೆಸುವುದರೊಂದಿಗೆ ಇನ್ನೊಬ್ಬರಿಗೆ ಸ್ಫೂರ್ತಿಯಾಗಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪನ್ಯಾಸಕಿ ಅನುಷಾ ಡಿ.ಜೆ. ವಹಿಸಿ ಮಾತನಾಡುತ್ತಾ ಹೆಣ್ಣು ಸಮಾಜದ ಕಣ್ಣು ಸಮಾಜದಲ್ಲಿ ಹೆಣ್ಣಿಗೆ ವಿಶೇಷವಾದ ಸ್ಥಾನಮಾನವಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿ ವಿಶ್ವದ ಗಮನ ಸೆಳೆಯುವಲ್ಲಿ ಮಹಿಳೆಯ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು.

ಪ್ರಶಿಕ್ಷಣಾರ್ಥಿಗಳಾದ ವಂದನಾ ಹಾಗೂ ಭೂಮಿಕಾ ಅಂತರಾಷ್ಟ್ರೀಯ ಮಹಿಳಾ ದಿನದ ಕುರಿತು ಮಾತನಾಡಿದರು.

ಉಪನ್ಯಾಸಕರಾದ ಮಂಜು ಆರ್ ಹಾಗೂ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಅಂಬಿಕಾ ಪ್ರಾರ್ಥಿಸಿ ಧನ್ಯಶ್ರೀ ಸ್ವಾಗತಿಸಿ. ಸುರಕ್ಷಾ ವಂದಿಸಿ. ಫಾತಿಮತ್ ರಾಯೀಝ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!