April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲ್ಮಂಜ: ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಮೋಟಾರು ಸೈಕಲ್ ಹಾಗೂ ಕಾರು ಡಿಕ್ಕಿ ಯಾದ ಘಟನೆ ಮಾ.8ರಂದು ನಡೆದಿದೆ.

ತವಂದಿ ಗ್ರಾಮ ಸೂರಗೊಂಡನಹಳ್ಳಿ ಹಿರಿಯೂರು ನಿವಾಸಿ ಚಿದಾನಂದಯ್ಯ (51ವ.) ಎಂಬವರ ದೂರಿನಂತೆ, ಮಾ.08 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ, ಚಿದಾನಂದಯ್ಯ ರವರು ತನ್ನ ಬಾಬ್ತು ಕೆಎ16ಬಿ8176ನೇ ಮೋಟಾರು ಸೈಕಲನ್ನು ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ, ಕೆಎ08ಎಂ5139ನೇ ಕಾರನ್ನು ಅದರ ಚಾಲಕ ಸೋಮೇಶ್‌ ಎಂಬವರು ದುಡುಕುತನದಿಂದ ಚಲಾಯಿಸಿ ಕೊಂಡು ಬಂದು, ಚಿದಾನಂದಯ್ಯರವರ ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ, ಚಿದಾನಂದಯ್ಯ ಮೋಟಾರು ಸೈಕಲ್‌ ಸಮೇತ ರಸ್ತೆಗೆ ಬಿದ್ದು ಬಲಕಾಲಿಗೆ ಗುದ್ದಿದ ಗಾಯವುಂಟಾಗಿ, ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!