July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲ್ಮಂಜ: ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಮೋಟಾರು ಸೈಕಲ್ ಹಾಗೂ ಕಾರು ಡಿಕ್ಕಿ ಯಾದ ಘಟನೆ ಮಾ.8ರಂದು ನಡೆದಿದೆ.

ತವಂದಿ ಗ್ರಾಮ ಸೂರಗೊಂಡನಹಳ್ಳಿ ಹಿರಿಯೂರು ನಿವಾಸಿ ಚಿದಾನಂದಯ್ಯ (51ವ.) ಎಂಬವರ ದೂರಿನಂತೆ, ಮಾ.08 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ, ಚಿದಾನಂದಯ್ಯ ರವರು ತನ್ನ ಬಾಬ್ತು ಕೆಎ16ಬಿ8176ನೇ ಮೋಟಾರು ಸೈಕಲನ್ನು ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ, ಕೆಎ08ಎಂ5139ನೇ ಕಾರನ್ನು ಅದರ ಚಾಲಕ ಸೋಮೇಶ್‌ ಎಂಬವರು ದುಡುಕುತನದಿಂದ ಚಲಾಯಿಸಿ ಕೊಂಡು ಬಂದು, ಚಿದಾನಂದಯ್ಯರವರ ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ, ಚಿದಾನಂದಯ್ಯ ಮೋಟಾರು ಸೈಕಲ್‌ ಸಮೇತ ರಸ್ತೆಗೆ ಬಿದ್ದು ಬಲಕಾಲಿಗೆ ಗುದ್ದಿದ ಗಾಯವುಂಟಾಗಿ, ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!