23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ಕೀಟಲೆ ನಡೆಸುತ್ತಾ ಇದ್ದ‌ ತಂಡವೊಂದನ್ನು ಸೋಡಾ ಬಾಟ್ಲಿಗಳನ್ನು, ಹಾಗೂ ಗ್ಲಾಸ್ ಗಳನ್ನು ರಸ್ತೆಯಲ್ಲಿ ಒಡೆದು ಹಾಕಿದ್ದೀರಿ ಎಂದು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆಗೆ‌ ಯತ್ನಿಸೀದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ದ ಹಾಗೂ ಇತರ ಅಪರಿಚಿತರ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹೇಶ್, ಸುರೇಶ್, ಅರುಣ್ ಹಾಗೂ ಇತರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ಕೀಟಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ. ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಸೋಡಾ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ರಾಮಯ್ಯ ಅವರು ಪ್ರಶ್ನಿಸಿದ್ದಾರೆ ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya
error: Content is protected !!