38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

ಬೆಳ್ತಂಗಡಿ : ಕರ್ನಾಟಕ ಸರಕಾರ ದ.ಕ ಜಿಲ್ಲಾ ಆಡಳಿತ, ತಾಲೂಕು ಆಡಳಿತ ಇದರ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಉಚಿತ ಪ್ರಯಾಣ, ಇದರ ಬೆಳ್ತಂಗಡಿ ತಾಲೂಕಿನ ಫಲಾನುಭವಿಗಳ ಸಮಾವೇಶ ಮಾ.9ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಜರುಗಿತು.

ಸಮಾವೇಶವನ್ನು ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್ ಹಾಗೂ ಮಂಜುನಾಥ ಭಂಡಾರಿ, ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್‍ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ , ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಭಾಗವಹಿಸಿದ್ದರು.

ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಿಡಿಪಿಒ ಪ್ರಿಯಾ ಆಗ್ನೇಶ್ , ಅನ್ನ ಭಾಗ್ಯ ಯೋಜನೆ ಬಗ್ಗೆ ಆಹಾರ ನಿರೀಕ್ಷಕ ವಿಶ್ವ ಕೆ, ಯುವನಿಧಿ ಬಗ್ಗೆ ಪ್ರದೀಪ್ ಡಿಸೋಜ ಮಂಗಳೂರು , ಗೃಹ ಜ್ಯೋತಿ ಬಗ್ಗೆ ಕ್ಲೆಮೆಂಟ್ ಬೆಂಜಮಿನ್ ವರದಿ ಮಂಡಿಸಿದರು.

ಕಾರ್‍ಯಕ್ರಮದಲ್ಲಿ ತಾಲೂಕಿನ 81 ಗ್ರಾಮಗಳಿಂದ ಆಗಮಿಸಿದ ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
error: Content is protected !!