July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲ್ಮಂಜ: ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಮೋಟಾರು ಸೈಕಲ್ ಹಾಗೂ ಕಾರು ಡಿಕ್ಕಿ ಯಾದ ಘಟನೆ ಮಾ.8ರಂದು ನಡೆದಿದೆ.

ತವಂದಿ ಗ್ರಾಮ ಸೂರಗೊಂಡನಹಳ್ಳಿ ಹಿರಿಯೂರು ನಿವಾಸಿ ಚಿದಾನಂದಯ್ಯ (51ವ.) ಎಂಬವರ ದೂರಿನಂತೆ, ಮಾ.08 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ, ಚಿದಾನಂದಯ್ಯ ರವರು ತನ್ನ ಬಾಬ್ತು ಕೆಎ16ಬಿ8176ನೇ ಮೋಟಾರು ಸೈಕಲನ್ನು ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ, ಕೆಎ08ಎಂ5139ನೇ ಕಾರನ್ನು ಅದರ ಚಾಲಕ ಸೋಮೇಶ್‌ ಎಂಬವರು ದುಡುಕುತನದಿಂದ ಚಲಾಯಿಸಿ ಕೊಂಡು ಬಂದು, ಚಿದಾನಂದಯ್ಯರವರ ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ, ಚಿದಾನಂದಯ್ಯ ಮೋಟಾರು ಸೈಕಲ್‌ ಸಮೇತ ರಸ್ತೆಗೆ ಬಿದ್ದು ಬಲಕಾಲಿಗೆ ಗುದ್ದಿದ ಗಾಯವುಂಟಾಗಿ, ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya
error: Content is protected !!