22.9 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ಕೀಟಲೆ ನಡೆಸುತ್ತಾ ಇದ್ದ‌ ತಂಡವೊಂದನ್ನು ಸೋಡಾ ಬಾಟ್ಲಿಗಳನ್ನು, ಹಾಗೂ ಗ್ಲಾಸ್ ಗಳನ್ನು ರಸ್ತೆಯಲ್ಲಿ ಒಡೆದು ಹಾಕಿದ್ದೀರಿ ಎಂದು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆಗೆ‌ ಯತ್ನಿಸೀದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ದ ಹಾಗೂ ಇತರ ಅಪರಿಚಿತರ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹೇಶ್, ಸುರೇಶ್, ಅರುಣ್ ಹಾಗೂ ಇತರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ಕೀಟಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ. ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಸೋಡಾ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ರಾಮಯ್ಯ ಅವರು ಪ್ರಶ್ನಿಸಿದ್ದಾರೆ ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya
error: Content is protected !!