25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ಕೀಟಲೆ ನಡೆಸುತ್ತಾ ಇದ್ದ‌ ತಂಡವೊಂದನ್ನು ಸೋಡಾ ಬಾಟ್ಲಿಗಳನ್ನು, ಹಾಗೂ ಗ್ಲಾಸ್ ಗಳನ್ನು ರಸ್ತೆಯಲ್ಲಿ ಒಡೆದು ಹಾಕಿದ್ದೀರಿ ಎಂದು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆಗೆ‌ ಯತ್ನಿಸೀದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ದ ಹಾಗೂ ಇತರ ಅಪರಿಚಿತರ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹೇಶ್, ಸುರೇಶ್, ಅರುಣ್ ಹಾಗೂ ಇತರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ಕೀಟಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ. ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಸೋಡಾ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ರಾಮಯ್ಯ ಅವರು ಪ್ರಶ್ನಿಸಿದ್ದಾರೆ ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya
error: Content is protected !!