22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ಕೀಟಲೆ ನಡೆಸುತ್ತಾ ಇದ್ದ‌ ತಂಡವೊಂದನ್ನು ಸೋಡಾ ಬಾಟ್ಲಿಗಳನ್ನು, ಹಾಗೂ ಗ್ಲಾಸ್ ಗಳನ್ನು ರಸ್ತೆಯಲ್ಲಿ ಒಡೆದು ಹಾಕಿದ್ದೀರಿ ಎಂದು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆಗೆ‌ ಯತ್ನಿಸೀದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ದ ಹಾಗೂ ಇತರ ಅಪರಿಚಿತರ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹೇಶ್, ಸುರೇಶ್, ಅರುಣ್ ಹಾಗೂ ಇತರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ಕೀಟಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ. ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಸೋಡಾ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ರಾಮಯ್ಯ ಅವರು ಪ್ರಶ್ನಿಸಿದ್ದಾರೆ ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!