22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

ಬೆಳ್ತಂಗಡಿ; ಎರಡನೇ ಮಹಾಯುದ್ಧದ ಸಂದರ್ಭ ಸಂತ್ರಸ್ತರಿಗೆ ಸಹಾಯ ಮಾಡುವ ಉದ್ದೇಶದಿಂದ 1917 ರಲ್ಲಿ ಆರಂಭಗೊಂಡ ಲಯನ್ಸ್ ಸಂಸ್ಥೆ ಇಂದು 50 ಸಾವಿರ ಕ್ಲಬ್ ಗಳಾಗಿ, 200 ದೇಶಗಳಲ್ಲಿ 14 ಲಕ್ಷ‌ ಸದಸ್ಯರನ್ನೊಳಗೊಂಡು ವಿಶದವ ವ್ಯಾಪಿಯಾಗಿದೆ. ಪರಸ್ಪರ ಎಲ್ಲರೂ ಜೊತೆಯಾಗಿ ಸೇವೆ ಮಾಡುವುದು ಮಾತ್ರವಲ್ಲದೆ ಸಾಂಗತ್ಯ ಬೆಳೆಸಿಕೊಳ್ಳುವುದೇ ಇದರ ಮೂಲ ಗುರಿ ಎಂದು ಲಯನ್ಸ್ ಜಿಲ್ಲಾ ಸಿಕ್ಯೂಐ ಸಂಯೋಜಕ ಪ್ರಶಾಂತ್ ಶೆಟ್ಟಿ ಹೇಳಿದರು.


ಬೆಳ್ತಂಗಡಿ ಲಯನ್ಸ್ ಕ್ಲಬ್ ನಲ್ಲಿ ನಡೆದ ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್ ಸೆಮಿನಾರ್ ನಲ್ಲಿ ಅವರು ಸಂಪನ್ಮೂಲ ಉಪನ್ಯಾಸ ನೀಡುತ್ತಿದ್ದರು.
ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷದ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಿದ್ದರು.
ವಿಶೇಷ ಅತಿಥಿಯಾಗಿ ಜಿಲ್ಲಾ ಮಾಜಿ ರಾಜ್ಯಪಾಲ ರೊನಾಲ್ಡ್ ಗೋಮ್ಸ್ ಭಾಗಿಯಾಗಿದ್ದರು. ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೋ, ತಾಲೂಕು ಕೋಶಾಧಿಕಾರಿ ಸುಭಾಷಿಣಿ, ನಿಕಟಪೂರ್ವ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ ಉಪಸ್ಥಿತರಿದ್ದರು.


ದತ್ತಾತ್ರೇಯ ಗೊಲ್ಲ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಂಡಿಸಿದರು. ರವೀಂದ್ರ ಶೆಟ್ಟಿ ಬಳೆಂಜ ಪ್ರಾರ್ಥಿಸಿದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಧ್ವಜವಂದನೆ‌ ಹಾಗೂ ಬಿ.ಪಿ ಅಶೋಕ್ ನೀತಿ ಸಂಹಿತೆ ವಾಚಿಸಿದರು. ಕೆ‌ ಕೃಷ್ಣ ಆಚಾರ್ ಕಾರ್ಯಕ್ರಮ ನಿರೂಪಿಸಿ ಕ್ಲಬ್ ಕಾರ್ಯದರ್ಶಿ ಅನಂತಕೃಷ್ಣ ಧನ್ಯವಾದವಿತ್ತರು.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya
error: Content is protected !!