25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ನಡ : ಸರಕಾರಿ ಪ್ರೌಢಶಾಲೆ ನಡ ಪ್ರಸಕ್ತ 2023-24 ನೇ ಸಾಲಿನಲ್ಲಿ ಒಟ್ಟು 138 ವಿದ್ಯಾರ್ಥಿಗಳಿರುವ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಗಣಿತ, ಹಿಂದಿ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಪ್ರಯೋಗಶಾಲೆ ಮತ್ತು ಸ್ಮಾರ್ಟ್ ಕ್ಲಾಸ್ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ನವೀನತೆಯ ಶಿಕ್ಷಣ ನೀಡುತ್ತಿರುವ ಮಾದರಿ ಸರಕಾರಿ ಶಾಲೆಯಲ್ಲಿ ಮಾ. 9 ರಂದು ಸಾರಸ್ವತ ಲರ್ನಿಂಗ್ ಫೌಂಡೇಶನ್ USA ಕ್ಯಾಲಿಪೋರ್ನಿಯಾ ಇವರ ವತಿಯಿಂದ ಶಾಲೆಯಲ್ಲಿ ಕಲಿಯುತ್ತಿರುವ ಪ್ರತೀ ವಿದ್ಯಾರ್ಥಿಗೆ ತಲಾ ವಿದ್ಯಾರ್ಥಿ ವೇತನ 1750/ (ಸಾವಿರದ ಏಳುನೂರ ಐವತ್ತು) ರೂ ನಂತೆ ವಿತರಿಸಲಾಯಿತು. ಹಾಗೂ ಮೂವರು ಅಡುಗೆ ಸಿಬಂದಿಯವರಿಗೆ ತಲಾ 3000 ದಂತೆ ಸಹಾಯ ಧನವನ್ನು ವಿತರಿಸಲಾಯಿತು.

ನಡ ಪ್ರೌಢಶಾಲೆಯ ನಿವೃತ್ತ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಜಾಹ್ನವಿ ಕೆ ಎಸ್ ಇವರ ಸಹೋದರರಾಗಿರುವ ಕೆ ನರೇಂದ್ರನಾಥ್, ವ್ಯವಸ್ಥಾಪಕರು ಸಾರಸ್ವತ ಲರ್ನಿಂಗ್ ಫೌಂಡೇಶನ್ ಇವರು ಸತತ 5 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡುತ್ತಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿದ್ದಾರೆ. ಈ ಸಂದರ್ಭ ಶ್ರೀಮತಿ ಜಾಹ್ನವಿ ಕೆ ಎಸ್ ನಿವೃತ್ತ ಪ್ರಥಮ ದರ್ಜೆ ಸಹಾಯಕರು, ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಚೆಕ್ ಮೂಲಕ ವಿದ್ಯಾರ್ಥಿ ವೇತನ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ‌ ಬಾಬು ಡಿ ಸಾರಸ್ವತ ಲರ್ನಿಂಗ್ ಫೌಂಡೇಶನ್ ಸಂಸ್ಥೆಯ ವ್ಯವಸ್ಥಾಪಕರಿಗೆ ಹಾಗೂ ಈ ವಿದ್ಯಾರ್ಥಿ ವೇತನದ ರೂವಾರಿಗಳಾದ ಶ್ರೀಮತಿ ಜಾಹ್ನವಿ ಕೆ ಎಸ್ ಧನ್ಯವಾದವಿತ್ತರು.

Related posts

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
error: Content is protected !!