25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳ ಶಿಬಿರವನ್ನು ಫೆ.29ರಿಂದ ಮಾ.6ರವರೆಗೆ ಹಮ್ಮಿಕೊಳ್ಳಲಾಗಿತ್ತು. ಶಿಬಿರಾರ್ಥಿಗಳು ಸಿಯೋನ್ ಆಶ್ರಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಿರ್ವಹಿಸುವುದರೊಂದಿಗೆ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಆಶ್ರಮನಿವಾಸಿಗಳನ್ನು ಮನರಂಜಿಸಿದರು.

ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ರಾಧಾಕೃಷ್ಣ ಹೆಚ್.ಬಿ. ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಪ್ರೋ.ಹರಿಪ್ರಸಾದ್ ಬಿ. ಶೆಟ್ಟಿ, ಯತೀಶ್ ಎಂ. ಶೆಟ್ಟಿ, ಪ್ರವೀಣ್ ಗಟ್ಟಿ ಬಸ್ತಿಕೋಡಿ, ಉದಯಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್, ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಮತ್ತು ಸುಭಾಷ್ ಯು.ಪಿ., ಮ್ಯಾನೇಜರ್ ಶ್ರೀಮತಿ ಸಂಧ್ಯಾ ಸುಭಾಷ್, ಕಾಲೇಜಿನ ಪ್ರಾದ್ಯಾಪಕರುಗಳು ಉಪಸ್ಥಿತರಿದ್ದರು. ಶಿಬಿರದ ಮುಂದಾಳತ್ವವನ್ನು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಖಾರಿಗಳಾದ ಡಾ.ಮೇರಿ ಎಂ.ಜೆ. ಹಾಗೂ ಉದಯ್ ಕುಮರ್ ಇವರು ವಹಿಸಿಕೊಂಡಿದ್ದರು.

Related posts

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!