September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಕೇಲ್ದಡ್ಕ, ಒಂಜಾರೆ ಮುದ್ದುಂಜ,ಹಾಕೋಟೆ, ಕಲಾಯಿತೊಟ್ಟು,ಕಜೆ, ಕೆಳಗಿನಬೆಟ್ಟು ಮತ್ತು ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ತಡರಾತ್ರಿ ನುಗ್ಗಿದ ಒಂಟಿಸಲಗದಿಂದ ಬಾಳೆ ಕೃಷಿ ನಾಶವಾಗಿದೆ.

ಗ್ರಾಮಸ್ಥರು ತಡ ರಾತ್ರಿ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ತಕ್ಷಣ ರಾತ್ರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳೀಯ ಕೃಷಿಕರ ಜೊತೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದರೂ ಸುಳಿವು ಸಿಗಲಿಲ್ಲ. ಕೇಲ್ದಡ್ಕ ಉಮೇಶ್ ರವರ ಮನೆ ದನದ ಹಟ್ಟಿಯ ಪಕ್ಕದಲ್ಲಿ ಆನೆ ಬರುವುದನ್ನು ಗಮನಿಸಿದ ಸಾಕು ನಾಯಿ ಕೂಗಿದಾಗ ಒಂಟಿ ಸಲಗ ಗೀಳು (ಕೂಗು) ಶಬ್ದವು ಸಿಸಿ ಕ್ಯಾಮರಾದಲ್ಲಿ ಸೆರೆ ಯಾಗಿದೆ. ಹಾಗೂ ಸ್ವಲ್ಪ ಸಮಯದ ನಂತರ ಪಕ್ಕದ ಮನೆ ನಿವಾಸಿ ರಮಾನಂದ ಪೂಜಾರಿಯವರ ಮನೆಯಂಗಳದಲ್ಲಿ ಕಾಣಿಸಿಕೊಂಡಿದ್ದು,ವಸಂತ ಕುಮಾರ್ ಮತ್ತು ಜನಾರ್ದನ ಪೂಜಾರಿ ಯವರ ತೋಟದಲ್ಲಿ ಬಾಳೆ ಗಿಡಗಳನ್ನು ನಾಶಪಡಿಸಿರುವುದು ಕಂಡುಬರುತ್ತದೆ.ಕಲಾಯಿತೊಟ್ಟು ಗಿರಿಯಪ್ಪ ಗೌಡರ ಮನೆ ಅಂಗಳ ಪಕ್ಕದಲ್ಲಿ ಕಾಣಿಸಿಕೊಂಡು ನಂತರ ಕಜೆ ಕೆಳಗಿನ ಬೆಟ್ಟು ಶ್ರೀಧರ ಪೂಜಾರಿ ಯವರ ಮನೆ ದೈವದ ಕಟ್ಟೆ ಪಕ್ಕದಲ್ಲಿರುವ ಕಬ್ಬು ಗಿಡಗಳನ್ನು ತಿಂದು ಹಾಳು ಕೆಡವಿದೆ. ಹಾಗೂ ನಸುಕಿನಲ್ಲಿ ಪಾಂಡಿಬೆಟ್ಟು ವಿಠ್ಠಲ ಗೌಡರ ತೋಟದ ಬಾಳೆ ಗಿಡಗಳನ್ನು ಮುರಿದು ಹಾಕಿದ ದೃಶ್ಯ ಕಾಣಸಿಗುತ್ತವೆ ಎಂದು ಕೃಷಿಕರು ಹೇಳಿದ್ದರು. ಹಾಗೂ ರಾತ್ರಿ ವೇಳೆಯಲ್ಲಿ ಕೃಷಿಗೆ ನೀರು ಹಾಯಿಸಲು ತೋಟಕ್ಕೆ ಹೋಗಲು ಭಯ ಬೀತರಾಗಿದ್ದು ನೊಂದ ಕೃಷಿಕರ ನಿದ್ದೆ ಗೆಡಿಸಿದೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಮಡಂತ್ಯಾರು ಉಪವಲಯ ಅರಣ್ಯಾಧಿಕಾರಿ ರಾಜಶೇಖರ, ಗಸ್ತು ಅರಣ್ಯ ರಕ್ಷಕರಾದ ಸತೀಶ್ ಮತ್ತು ಅಕಿಲೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕೃಷಿಕರಿಗೆ ತೊಂದರೆಯಾಗದಂತೆ ನೀಗ ವಹಿಸಿದರು. ಕೊಯ್ಯೂರು ಗ್ರಾಮದಲ್ಲಿ ಕಳೆದ 2 ದಿನಗಳಿಂದ ಕೊಯ್ಯೂರು ಪರಿಸರದಲ್ಲಿ ರಾತ್ರಿ 2 ಆನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಂಧಲೆ ಮಾಡಿದ ಬಗ್ಗೆ ಕೃಷಿಕರು ಅತಂಕದಲ್ಲಿದ್ದಾರೆ.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya
error: Content is protected !!