22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ: ಕನಾ೯ಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 138 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ವಿತರಣೆ ಸಮಾರಂಭ ಮಾ. 10 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಿತು.

ದ.ಕ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿ, ರಾಜ್ಯ ಸರ್ಕಾರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಒದಗಿಸಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮ ಅಧ್ಯಕ್ಷ ಮಮತಾ ಗಟ್ಟಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಹೇಮಾ ಕಾಯ೯ಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ಪವಾಡಪ್ಪ ಧನ್ಯವಾದ ಅರ್ಪಿಸಿದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya
error: Content is protected !!