September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಕೇಲ್ದಡ್ಕ, ಒಂಜಾರೆ ಮುದ್ದುಂಜ,ಹಾಕೋಟೆ, ಕಲಾಯಿತೊಟ್ಟು,ಕಜೆ, ಕೆಳಗಿನಬೆಟ್ಟು ಮತ್ತು ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ತಡರಾತ್ರಿ ನುಗ್ಗಿದ ಒಂಟಿಸಲಗದಿಂದ ಬಾಳೆ ಕೃಷಿ ನಾಶವಾಗಿದೆ.

ಗ್ರಾಮಸ್ಥರು ತಡ ರಾತ್ರಿ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ತಕ್ಷಣ ರಾತ್ರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳೀಯ ಕೃಷಿಕರ ಜೊತೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದರೂ ಸುಳಿವು ಸಿಗಲಿಲ್ಲ. ಕೇಲ್ದಡ್ಕ ಉಮೇಶ್ ರವರ ಮನೆ ದನದ ಹಟ್ಟಿಯ ಪಕ್ಕದಲ್ಲಿ ಆನೆ ಬರುವುದನ್ನು ಗಮನಿಸಿದ ಸಾಕು ನಾಯಿ ಕೂಗಿದಾಗ ಒಂಟಿ ಸಲಗ ಗೀಳು (ಕೂಗು) ಶಬ್ದವು ಸಿಸಿ ಕ್ಯಾಮರಾದಲ್ಲಿ ಸೆರೆ ಯಾಗಿದೆ. ಹಾಗೂ ಸ್ವಲ್ಪ ಸಮಯದ ನಂತರ ಪಕ್ಕದ ಮನೆ ನಿವಾಸಿ ರಮಾನಂದ ಪೂಜಾರಿಯವರ ಮನೆಯಂಗಳದಲ್ಲಿ ಕಾಣಿಸಿಕೊಂಡಿದ್ದು,ವಸಂತ ಕುಮಾರ್ ಮತ್ತು ಜನಾರ್ದನ ಪೂಜಾರಿ ಯವರ ತೋಟದಲ್ಲಿ ಬಾಳೆ ಗಿಡಗಳನ್ನು ನಾಶಪಡಿಸಿರುವುದು ಕಂಡುಬರುತ್ತದೆ.ಕಲಾಯಿತೊಟ್ಟು ಗಿರಿಯಪ್ಪ ಗೌಡರ ಮನೆ ಅಂಗಳ ಪಕ್ಕದಲ್ಲಿ ಕಾಣಿಸಿಕೊಂಡು ನಂತರ ಕಜೆ ಕೆಳಗಿನ ಬೆಟ್ಟು ಶ್ರೀಧರ ಪೂಜಾರಿ ಯವರ ಮನೆ ದೈವದ ಕಟ್ಟೆ ಪಕ್ಕದಲ್ಲಿರುವ ಕಬ್ಬು ಗಿಡಗಳನ್ನು ತಿಂದು ಹಾಳು ಕೆಡವಿದೆ. ಹಾಗೂ ನಸುಕಿನಲ್ಲಿ ಪಾಂಡಿಬೆಟ್ಟು ವಿಠ್ಠಲ ಗೌಡರ ತೋಟದ ಬಾಳೆ ಗಿಡಗಳನ್ನು ಮುರಿದು ಹಾಕಿದ ದೃಶ್ಯ ಕಾಣಸಿಗುತ್ತವೆ ಎಂದು ಕೃಷಿಕರು ಹೇಳಿದ್ದರು. ಹಾಗೂ ರಾತ್ರಿ ವೇಳೆಯಲ್ಲಿ ಕೃಷಿಗೆ ನೀರು ಹಾಯಿಸಲು ತೋಟಕ್ಕೆ ಹೋಗಲು ಭಯ ಬೀತರಾಗಿದ್ದು ನೊಂದ ಕೃಷಿಕರ ನಿದ್ದೆ ಗೆಡಿಸಿದೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಮಡಂತ್ಯಾರು ಉಪವಲಯ ಅರಣ್ಯಾಧಿಕಾರಿ ರಾಜಶೇಖರ, ಗಸ್ತು ಅರಣ್ಯ ರಕ್ಷಕರಾದ ಸತೀಶ್ ಮತ್ತು ಅಕಿಲೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕೃಷಿಕರಿಗೆ ತೊಂದರೆಯಾಗದಂತೆ ನೀಗ ವಹಿಸಿದರು. ಕೊಯ್ಯೂರು ಗ್ರಾಮದಲ್ಲಿ ಕಳೆದ 2 ದಿನಗಳಿಂದ ಕೊಯ್ಯೂರು ಪರಿಸರದಲ್ಲಿ ರಾತ್ರಿ 2 ಆನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಂಧಲೆ ಮಾಡಿದ ಬಗ್ಗೆ ಕೃಷಿಕರು ಅತಂಕದಲ್ಲಿದ್ದಾರೆ.

Related posts

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya
error: Content is protected !!