24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಧೂಳಿನಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಸಾರ್ವಜನಿಕರು ರಸ್ತೆ ಬದಿಯಲ್ಲಿ ಪ್ರತಿಭಟನಾ ರೀತಿಯಲ್ಲಿ ಸೂಚನಾ ಫಲಕ ಅಳವಡಿಸಿ, ಅಸಮಾಧಾನ ಹೊರಹಾಕಿದ್ದಾರೆ.

ಇಂದು ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಬೆಳ್ತಂಗಡಿ ನಗರದಲ್ಲಿ ಹಾದು ಹೋಗುವ ರಸ್ತೆಗಳ ಬಗ್ಗೆ ವರ್ತಕರ ಹಾಗೂ ಕಟ್ಟಡ ಮಾಲಿಕರ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಜನಸಂಪರ್ಕ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಾಮ ಫಲಕಗಳು ಗಮನ ಸೆಳೆಯಿತು.

ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ಎಂಬ ಹಲವಾರು ಫಲಕಗಳು ರಸ್ತೆಯುದ್ದಕ್ಕೂ ಅಳವಡಿಸಲಾಗಿದೆ.ಕಳೆದ ಕೆಲವು ಸಮಯಗಳಿಂದ ನಾಗಪುರ ಮೂಲದ ಗುತ್ತಿಗೆದಾರರು ಹೆದ್ದಾರಿ ಕಾಮಗಾರಿ ನಡೆಸುತಿದ್ದು, ದೂಳಿನಿಂದಾಗಿ ರಸ್ತೆಯಲ್ಲಿ ಸಂಚಾರ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಯಲ್ಲಿ ದೂಳಿನಿಂದಾಗಿ ದ್ವಿಚಕ್ರ ಸೇರಿದಂತೆ ಇತರ ವಾಹನ ಸಂಚರಿಸಲು ಹರ ಸಾಹಸ ಪಡುವಂತಾಗಿದೆ ಸಾರ್ವಜನಿಕರು,ವಿದ್ಯಾರ್ಥಿಗಳು ದೂಳಿನಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ.

ಸಾರ್ವಜನಿಕರು ಈ ಸಮಸ್ಯೆಗಳನ್ನು ಯಾರಲ್ಲಿ ಹೇಳಿಕೊಳ್ಳುವುದು ಎಂದು ತಿಳಿಯದೇ ಇಂದು ಶಾಸಕರು, ಅಧಿಕಾರಿಗಳು ಹೆದ್ದಾರಿಯ‌ ಕೆಲವು ಕಡೆಗಳಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ರಸ್ತೆ ಬದಿಯಲ್ಲಿ ಫಲಕಗಳನ್ನು ಅಳವಡಿಸಿ ಸಂಬಂಧ ಪಟ್ಟವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya
error: Content is protected !!