32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು. ಮಾಹಿತಿ ನೀಡಲು ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಯೋಗಿಶ್ ಮಾಯರವರು ಮಾತನಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಜನತೆಗೆ ನೀಡಿದ ಹಕ್ಕು. ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ಆಯ್ಕೆ ಹಾಗೂ ಸದೃಢ ಸಮಾಜ ನಿರ್ಮಾಣ ಮಾಡುವುದರಲ್ಲಿ ಜನ ಜಾಗೃತರಾಗಬೇಕು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳು. ಈ ಬಗ್ಗೆ ತಿಳುವಳಿಕೆಯನ್ನು ಪಡೆಯುವ ಮೂಲಕ ಜಾಗೃತ ನಾಗರಿಕರಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ತಿನ ವಾಚನಾಲಯದ ಅಧಿಕಾರಿ ಡೀಕಯ್ಯ ಗೌಡ ಅರಣೆಮಾರುರವರು ಮತ್ತು ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕರಾದ ಸುಮನ್ ಯು ಎಸ್ ರವರು ಸ್ವಾಗತಿಸಿ, ಶಿಕ್ಷಕ ಗಣೇಶ್ವರರವರು ವಂದಿಸಿದರು.

Related posts

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya
error: Content is protected !!