July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ: ಕನಾ೯ಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 138 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ವಿತರಣೆ ಸಮಾರಂಭ ಮಾ. 10 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಿತು.

ದ.ಕ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿ, ರಾಜ್ಯ ಸರ್ಕಾರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಒದಗಿಸಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮ ಅಧ್ಯಕ್ಷ ಮಮತಾ ಗಟ್ಟಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಹೇಮಾ ಕಾಯ೯ಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ಪವಾಡಪ್ಪ ಧನ್ಯವಾದ ಅರ್ಪಿಸಿದರು.

Related posts

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya
error: Content is protected !!