23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ: ಕನಾ೯ಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 138 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ವಿತರಣೆ ಸಮಾರಂಭ ಮಾ. 10 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಿತು.

ದ.ಕ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿ, ರಾಜ್ಯ ಸರ್ಕಾರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಒದಗಿಸಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮ ಅಧ್ಯಕ್ಷ ಮಮತಾ ಗಟ್ಟಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಹೇಮಾ ಕಾಯ೯ಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ಪವಾಡಪ್ಪ ಧನ್ಯವಾದ ಅರ್ಪಿಸಿದರು.

Related posts

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya
error: Content is protected !!