25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು. ಮಾಹಿತಿ ನೀಡಲು ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಯೋಗಿಶ್ ಮಾಯರವರು ಮಾತನಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಜನತೆಗೆ ನೀಡಿದ ಹಕ್ಕು. ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ಆಯ್ಕೆ ಹಾಗೂ ಸದೃಢ ಸಮಾಜ ನಿರ್ಮಾಣ ಮಾಡುವುದರಲ್ಲಿ ಜನ ಜಾಗೃತರಾಗಬೇಕು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳು. ಈ ಬಗ್ಗೆ ತಿಳುವಳಿಕೆಯನ್ನು ಪಡೆಯುವ ಮೂಲಕ ಜಾಗೃತ ನಾಗರಿಕರಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ತಿನ ವಾಚನಾಲಯದ ಅಧಿಕಾರಿ ಡೀಕಯ್ಯ ಗೌಡ ಅರಣೆಮಾರುರವರು ಮತ್ತು ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕರಾದ ಸುಮನ್ ಯು ಎಸ್ ರವರು ಸ್ವಾಗತಿಸಿ, ಶಿಕ್ಷಕ ಗಣೇಶ್ವರರವರು ವಂದಿಸಿದರು.

Related posts

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya
error: Content is protected !!