July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು. ಮಾಹಿತಿ ನೀಡಲು ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಯೋಗಿಶ್ ಮಾಯರವರು ಮಾತನಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಜನತೆಗೆ ನೀಡಿದ ಹಕ್ಕು. ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ಆಯ್ಕೆ ಹಾಗೂ ಸದೃಢ ಸಮಾಜ ನಿರ್ಮಾಣ ಮಾಡುವುದರಲ್ಲಿ ಜನ ಜಾಗೃತರಾಗಬೇಕು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳು. ಈ ಬಗ್ಗೆ ತಿಳುವಳಿಕೆಯನ್ನು ಪಡೆಯುವ ಮೂಲಕ ಜಾಗೃತ ನಾಗರಿಕರಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ತಿನ ವಾಚನಾಲಯದ ಅಧಿಕಾರಿ ಡೀಕಯ್ಯ ಗೌಡ ಅರಣೆಮಾರುರವರು ಮತ್ತು ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕರಾದ ಸುಮನ್ ಯು ಎಸ್ ರವರು ಸ್ವಾಗತಿಸಿ, ಶಿಕ್ಷಕ ಗಣೇಶ್ವರರವರು ವಂದಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya
error: Content is protected !!