March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ.

ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ಫಾರ್ಮ್ ನಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡುತ್ತಿದ್ದು ನಿರಂತರ ಕೃಷಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಜೆಸಿಬಿ ಮೂಲಕ ಮಣ್ಣು ಅಗೆಯುವ ಸಂದರ್ಭದಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಸಿಕ್ಕಿರುವುದರಿಂದ ಜನರಲ್ಲಿ ಭಯ,ಭಕ್ತಿಯ ವಾತಾವರಣ ಸೃಷ್ಟಿಯಾಗಿದೆ.

ಈ ನಾಗ ಕಲ್ಲುಗಳು ಸಿಕ್ಕಿದ ಪ್ರದೇಶಕ್ಕೆ ರಾಕೇಶ್ ಹೆಗ್ಡೆಯವರು ಜ್ಯೋತಿಷ್ಯರನ್ನು ಕರೆ ತಂದಾಗ ಈ ಕಲ್ಲುಗಳು ಸುಮಾರು 400 ವರ್ಷಗಳ ಹಿಂದಿನ ಕಾಲದವು ಎಂದು ತಿಳಿಸಿದರು.

ನಮ್ಮ ಇಕೋ ಫಾರ್ಮ್ ನಲ್ಲಿ ನಾಗಬನವಿರುವುದರಿಂದ ಬರುವ ಬುಧವಾರ ನಾಗದೇವರಿಗೆ ಪೂಜೆಗಳು ನಡೆಯಲಿದ್ದು ಇದೀಗ ಮಣ್ಣು ಅಗೆಯುವಾಗ ನಾಗ ಕಲ್ಲು ಸಿಕ್ಕಿರುವುದು ನಮಗೆ ಅಚ್ಚರಿ, ಭಯ, ಭಕ್ತಿ ಮೂಡಿಸಿದೆ ಎಂದು ರಾಕೇಶ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya
error: Content is protected !!