25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ.

ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ಫಾರ್ಮ್ ನಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡುತ್ತಿದ್ದು ನಿರಂತರ ಕೃಷಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಜೆಸಿಬಿ ಮೂಲಕ ಮಣ್ಣು ಅಗೆಯುವ ಸಂದರ್ಭದಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಸಿಕ್ಕಿರುವುದರಿಂದ ಜನರಲ್ಲಿ ಭಯ,ಭಕ್ತಿಯ ವಾತಾವರಣ ಸೃಷ್ಟಿಯಾಗಿದೆ.

ಈ ನಾಗ ಕಲ್ಲುಗಳು ಸಿಕ್ಕಿದ ಪ್ರದೇಶಕ್ಕೆ ರಾಕೇಶ್ ಹೆಗ್ಡೆಯವರು ಜ್ಯೋತಿಷ್ಯರನ್ನು ಕರೆ ತಂದಾಗ ಈ ಕಲ್ಲುಗಳು ಸುಮಾರು 400 ವರ್ಷಗಳ ಹಿಂದಿನ ಕಾಲದವು ಎಂದು ತಿಳಿಸಿದರು.

ನಮ್ಮ ಇಕೋ ಫಾರ್ಮ್ ನಲ್ಲಿ ನಾಗಬನವಿರುವುದರಿಂದ ಬರುವ ಬುಧವಾರ ನಾಗದೇವರಿಗೆ ಪೂಜೆಗಳು ನಡೆಯಲಿದ್ದು ಇದೀಗ ಮಣ್ಣು ಅಗೆಯುವಾಗ ನಾಗ ಕಲ್ಲು ಸಿಕ್ಕಿರುವುದು ನಮಗೆ ಅಚ್ಚರಿ, ಭಯ, ಭಕ್ತಿ ಮೂಡಿಸಿದೆ ಎಂದು ರಾಕೇಶ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya
error: Content is protected !!