30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ.

ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ಫಾರ್ಮ್ ನಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡುತ್ತಿದ್ದು ನಿರಂತರ ಕೃಷಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಜೆಸಿಬಿ ಮೂಲಕ ಮಣ್ಣು ಅಗೆಯುವ ಸಂದರ್ಭದಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಸಿಕ್ಕಿರುವುದರಿಂದ ಜನರಲ್ಲಿ ಭಯ,ಭಕ್ತಿಯ ವಾತಾವರಣ ಸೃಷ್ಟಿಯಾಗಿದೆ.

ಈ ನಾಗ ಕಲ್ಲುಗಳು ಸಿಕ್ಕಿದ ಪ್ರದೇಶಕ್ಕೆ ರಾಕೇಶ್ ಹೆಗ್ಡೆಯವರು ಜ್ಯೋತಿಷ್ಯರನ್ನು ಕರೆ ತಂದಾಗ ಈ ಕಲ್ಲುಗಳು ಸುಮಾರು 400 ವರ್ಷಗಳ ಹಿಂದಿನ ಕಾಲದವು ಎಂದು ತಿಳಿಸಿದರು.

ನಮ್ಮ ಇಕೋ ಫಾರ್ಮ್ ನಲ್ಲಿ ನಾಗಬನವಿರುವುದರಿಂದ ಬರುವ ಬುಧವಾರ ನಾಗದೇವರಿಗೆ ಪೂಜೆಗಳು ನಡೆಯಲಿದ್ದು ಇದೀಗ ಮಣ್ಣು ಅಗೆಯುವಾಗ ನಾಗ ಕಲ್ಲು ಸಿಕ್ಕಿರುವುದು ನಮಗೆ ಅಚ್ಚರಿ, ಭಯ, ಭಕ್ತಿ ಮೂಡಿಸಿದೆ ಎಂದು ರಾಕೇಶ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!