28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

ಉಜಿರೆ: ಪ್ರೊ. ಎನ್. ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿ
ಸೇವೆ ಸಲ್ಲಿಸಿದ್ದರು. ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇವರು ಕಥೆ, ಕಾವ್ಯ, ಅನುವಾದ ಕ್ಷೇತ್ರಗಳಲ್ಲಿ ಹಾಗೂ ಕಾರ್ಯಕ್ರಮ ನಿರೂಪಕರಾಗಿ, ವೈಚಾರಿಕ
ಬರಹಗಳ ಮೂಲಕವೂ ಗುರುತಿಸಿಕೊಂಡವರು. ಕರ್ನಾಟಕ ಸಾಹಿತ್ಯ ಅಕಾಡಮಿಯ ಪುರಸ್ಕಾರ, ದ.ಕ.
ಜಿಲ್ಲಾ ರಾಜೋತ್ಸವ ಪ್ರಶಸ್ತಿ, ರತ್ನಾಕರವರ್ಣಿ ಪ್ರಶಸ್ತಿ ಇದೇ ಮೊದಲಾದ ಹತ್ತು ಹಲವು ಪ್ರಶಸ್ತಿಗಳಿಂದ
ಪುರಸ್ಕೃತಗೊಂಡಿದ್ದರು.

ಇವರ ಅಗಲುವಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಬೆಳ್ತಂಗಡಿ ಜೈನ ಮಿಲನ್‌ನ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ನಿರ್ದೇಶಕ ಬಿ. ಸೋಮಶೇಖರ ಶೆಟ್ಟಿಯವರು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತಮ್ಮ ಸಂತಾಪದ ನುಡಿಯನ್ನು ತಿಳಿಸಿರುವರು.

Related posts

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!