25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗೃಹವಿಜ್ಞಾನ ವಿಭಾಗ ಮುಖ್ಯಸ್ಥೆ ಶೋಭಾ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದ್ದರು.

ಮಹಿಳೆಯರು ಸಮಾಜದಲ್ಲಿ ಯಾವ ರೀತಿ ಇರಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಅವರು ವಿವರಿಸಿದರು. ಹೆಣ್ಣು ಮಕ್ಕಳಿಗೆ ವಿದ್ಯಾಬ್ಯಾಸದ ಆವಶ್ಯಕತೆ, ವೃತ್ತಿ, ಹೂಡಿಕೆ ಮುಂತಾದ ವಿಷಯಗಳ ಕುರಿತು ತಿಳಿಸಿದರು.


ಸರಕಾರದಿಂದ ಮಹಿಳೆಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಆಶಿಕಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya
error: Content is protected !!