25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

ಕಣಿಯೂರು: ಇಲ್ಲಿಯ ಅಲೆಕ್ಕಿ, ಕುಕ್ಕುಂಜಾ, ಕುರಿಯಾಡಿ ಹಾಗೂ ಪದ್ಮುಂಜ ಕ್ವಾಟ್ರಾಸ್ ಬಳಿ ತಡರಾತ್ರಿ ಆನೆ ದಾಳಿ ಮಾಡಿದ್ದು ಬಾಳೆ ಕೃಷಿಗೆ ಹಾನಿ ಉಂಟುಮಾಡಿದೆ.

ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಎತ್ತ ಕಡೆ ಹೋಗಿದೆ ಅನ್ನುವ ಮಾಹಿತಿ ಲಭ್ಯವಾಗಿಲ್ಲ.

ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ ಗೌಡ ಕುರಿಯಾಡಿ, ಯಶೋಧ ನಾಯ್ಕ ಕೇರಿಕಟ್ಟೆ, ರಮೇಶ್ ಮೂಲ್ಯ ಕೇರಿಕಟ್ಟೆ, ಚಂದಪ್ಪ ಅಲೆಕ್ಕಿ ಇವರ ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.. ಅರಣ್ಯ ಇಲಾಖೆ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ.

Related posts

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya
error: Content is protected !!