23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ.

ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ಫಾರ್ಮ್ ನಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡುತ್ತಿದ್ದು ನಿರಂತರ ಕೃಷಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಜೆಸಿಬಿ ಮೂಲಕ ಮಣ್ಣು ಅಗೆಯುವ ಸಂದರ್ಭದಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಸಿಕ್ಕಿರುವುದರಿಂದ ಜನರಲ್ಲಿ ಭಯ,ಭಕ್ತಿಯ ವಾತಾವರಣ ಸೃಷ್ಟಿಯಾಗಿದೆ.

ಈ ನಾಗ ಕಲ್ಲುಗಳು ಸಿಕ್ಕಿದ ಪ್ರದೇಶಕ್ಕೆ ರಾಕೇಶ್ ಹೆಗ್ಡೆಯವರು ಜ್ಯೋತಿಷ್ಯರನ್ನು ಕರೆ ತಂದಾಗ ಈ ಕಲ್ಲುಗಳು ಸುಮಾರು 400 ವರ್ಷಗಳ ಹಿಂದಿನ ಕಾಲದವು ಎಂದು ತಿಳಿಸಿದರು.

ನಮ್ಮ ಇಕೋ ಫಾರ್ಮ್ ನಲ್ಲಿ ನಾಗಬನವಿರುವುದರಿಂದ ಬರುವ ಬುಧವಾರ ನಾಗದೇವರಿಗೆ ಪೂಜೆಗಳು ನಡೆಯಲಿದ್ದು ಇದೀಗ ಮಣ್ಣು ಅಗೆಯುವಾಗ ನಾಗ ಕಲ್ಲು ಸಿಕ್ಕಿರುವುದು ನಮಗೆ ಅಚ್ಚರಿ, ಭಯ, ಭಕ್ತಿ ಮೂಡಿಸಿದೆ ಎಂದು ರಾಕೇಶ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya
error: Content is protected !!