ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ.

ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ಫಾರ್ಮ್ ನಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡುತ್ತಿದ್ದು ನಿರಂತರ ಕೃಷಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಜೆಸಿಬಿ ಮೂಲಕ ಮಣ್ಣು ಅಗೆಯುವ ಸಂದರ್ಭದಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಸಿಕ್ಕಿರುವುದರಿಂದ ಜನರಲ್ಲಿ ಭಯ,ಭಕ್ತಿಯ ವಾತಾವರಣ ಸೃಷ್ಟಿಯಾಗಿದೆ.

ಈ ನಾಗ ಕಲ್ಲುಗಳು ಸಿಕ್ಕಿದ ಪ್ರದೇಶಕ್ಕೆ ರಾಕೇಶ್ ಹೆಗ್ಡೆಯವರು ಜ್ಯೋತಿಷ್ಯರನ್ನು ಕರೆ ತಂದಾಗ ಈ ಕಲ್ಲುಗಳು ಸುಮಾರು 400 ವರ್ಷಗಳ ಹಿಂದಿನ ಕಾಲದವು ಎಂದು ತಿಳಿಸಿದರು.

ನಮ್ಮ ಇಕೋ ಫಾರ್ಮ್ ನಲ್ಲಿ ನಾಗಬನವಿರುವುದರಿಂದ ಬರುವ ಬುಧವಾರ ನಾಗದೇವರಿಗೆ ಪೂಜೆಗಳು ನಡೆಯಲಿದ್ದು ಇದೀಗ ಮಣ್ಣು ಅಗೆಯುವಾಗ ನಾಗ ಕಲ್ಲು ಸಿಕ್ಕಿರುವುದು ನಮಗೆ ಅಚ್ಚರಿ, ಭಯ, ಭಕ್ತಿ ಮೂಡಿಸಿದೆ ಎಂದು ರಾಕೇಶ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya
error: Content is protected !!