ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಉಜಿರೆ: ನಾ’ವುಜಿರೆ ಎಂದೇ ಚಿರಪರಿಚಿತರಾಗಿದ್ದ ನಾಗರಾಜ ಪೂವಣಿ ಅವರು ನಮ್ಮದೇ ಸಂಸ್ಥೆಯಾದ ಉಜಿರೆಯ ಶ್ರೀ ಸಿದ್ಧವನ ಗುರುಕುಲ, ಎಸ್.ಡಿ.ಎಂ. ಸೆಕೆಂಡರಿ ಶಾಲೆ (ಅಂದಿನ ಡಿ.ಕೆ.ವಿ. ಪ್ರೌಢಶಾಲೆ), ಎಸ್.ಡಿ.ಎಂ. ಕಾಲೇಜು ಮೊದಲಾದ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಮ್ಮ ಪ್ರೀತಿ-ವಿಶ್ವಾಸ, ಅಭಿಮಾನಕ್ಕೆ ಪಾತ್ರರಾಗಿದ್ದರು.ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ನಮ್ಮ ಸಂಸ್ಥೆಗಳಲ್ಲಿ ದೊರಕಿದ ಎಲ್ಲಾ ಅವಕಾಶಗಳ ಸದುಪಯೋಗ ಪಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡರು.


ನಾವು “ಮಂಜುವಾಣಿ” ಮಾಸಪತ್ರಿಕೆಯ ಪ್ರಕಾಶನ ಆರಂಭಿಸಿದಾಗ, ಉತ್ತಮ ಸೇವೆ ನೀಡಿದ್ದಾರೆ. ಅವರ ಸರಳ ವ್ಯಕ್ತಿತ್ವ, ಸೌಜನ್ಯಪೂರ್ಣ ಸೇವೆ, ನಮಗೆ ಸಂತೋಷ ಮತ್ತು ಅಭಿಮಾನವನ್ನು ಉಂಟುಮಾಡಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಯವರು ಸಂತಾಪ ಸೂಚಿಸಿದರು.

Related posts

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!