25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಉಜಿರೆ: ನಾ’ವುಜಿರೆ ಎಂದೇ ಚಿರಪರಿಚಿತರಾಗಿದ್ದ ನಾಗರಾಜ ಪೂವಣಿ ಅವರು ನಮ್ಮದೇ ಸಂಸ್ಥೆಯಾದ ಉಜಿರೆಯ ಶ್ರೀ ಸಿದ್ಧವನ ಗುರುಕುಲ, ಎಸ್.ಡಿ.ಎಂ. ಸೆಕೆಂಡರಿ ಶಾಲೆ (ಅಂದಿನ ಡಿ.ಕೆ.ವಿ. ಪ್ರೌಢಶಾಲೆ), ಎಸ್.ಡಿ.ಎಂ. ಕಾಲೇಜು ಮೊದಲಾದ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಮ್ಮ ಪ್ರೀತಿ-ವಿಶ್ವಾಸ, ಅಭಿಮಾನಕ್ಕೆ ಪಾತ್ರರಾಗಿದ್ದರು.ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ನಮ್ಮ ಸಂಸ್ಥೆಗಳಲ್ಲಿ ದೊರಕಿದ ಎಲ್ಲಾ ಅವಕಾಶಗಳ ಸದುಪಯೋಗ ಪಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡರು.


ನಾವು “ಮಂಜುವಾಣಿ” ಮಾಸಪತ್ರಿಕೆಯ ಪ್ರಕಾಶನ ಆರಂಭಿಸಿದಾಗ, ಉತ್ತಮ ಸೇವೆ ನೀಡಿದ್ದಾರೆ. ಅವರ ಸರಳ ವ್ಯಕ್ತಿತ್ವ, ಸೌಜನ್ಯಪೂರ್ಣ ಸೇವೆ, ನಮಗೆ ಸಂತೋಷ ಮತ್ತು ಅಭಿಮಾನವನ್ನು ಉಂಟುಮಾಡಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಯವರು ಸಂತಾಪ ಸೂಚಿಸಿದರು.

Related posts

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!