April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

ಉಜಿರೆ: ಪ್ರೊ. ಎನ್. ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿ
ಸೇವೆ ಸಲ್ಲಿಸಿದ್ದರು. ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇವರು ಕಥೆ, ಕಾವ್ಯ, ಅನುವಾದ ಕ್ಷೇತ್ರಗಳಲ್ಲಿ ಹಾಗೂ ಕಾರ್ಯಕ್ರಮ ನಿರೂಪಕರಾಗಿ, ವೈಚಾರಿಕ
ಬರಹಗಳ ಮೂಲಕವೂ ಗುರುತಿಸಿಕೊಂಡವರು. ಕರ್ನಾಟಕ ಸಾಹಿತ್ಯ ಅಕಾಡಮಿಯ ಪುರಸ್ಕಾರ, ದ.ಕ.
ಜಿಲ್ಲಾ ರಾಜೋತ್ಸವ ಪ್ರಶಸ್ತಿ, ರತ್ನಾಕರವರ್ಣಿ ಪ್ರಶಸ್ತಿ ಇದೇ ಮೊದಲಾದ ಹತ್ತು ಹಲವು ಪ್ರಶಸ್ತಿಗಳಿಂದ
ಪುರಸ್ಕೃತಗೊಂಡಿದ್ದರು.

ಇವರ ಅಗಲುವಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಬೆಳ್ತಂಗಡಿ ಜೈನ ಮಿಲನ್‌ನ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ನಿರ್ದೇಶಕ ಬಿ. ಸೋಮಶೇಖರ ಶೆಟ್ಟಿಯವರು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತಮ್ಮ ಸಂತಾಪದ ನುಡಿಯನ್ನು ತಿಳಿಸಿರುವರು.

Related posts

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!