September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ ಮತ್ತು ಯುವ ವೇದಿಕೆ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ.10ರಂದು ವಾಣಿ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು.

ಉದ್ಘಾಟನೆಯನ್ನು ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇಲ್ಲಿನ ಮುಖ್ಯೋಪಾಧ್ಯಾಯಿನಿ ಉಮಾ.ಡಿ.ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷರಾದ ಗೀತಾ ರಾಮಣ್ಣ ಗೌಡ ವಹಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ನಿರ್ದೇಶಕಿ ಉಷಾ ವೆಂಕಟರಮಣ ಗೌಡ, ಬೆಳ್ತಂಗಡಿ ತಾಲೂಕು ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ನೆಹರು ಸ್ಮಾರಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಅನುರಾಧ ಕುರುಂಜಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾರತ ಸೌಟ್ಸ್&ಗೈಡ್ಸ್(ಬುಲ್ ಬುಲ್) ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಮುಂಡಾಜೆ ದಿನೇಶ್ ಮತ್ತು ಉಷಾ ದಂಪತಿ ಪುತ್ರಿ ಬೇಬಿ ದ್ವಿಶಾ ಯು.ಡಿ ಇವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಮಹಿಳಾ ವೇದಿಕೆಯ ಗೌರವಾಧ್ಯಕ್ಷರಾದ ಶುಭಾಷಿಣಿ ಜನಾರ್ದನ ಗೌಡ, ತಾಲೂಕು ಮಹಿಳಾ ವೇದಿಕೆಯ ಕಾರ್ಯದರ್ಶಿ ಲೀಲಾ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya
error: Content is protected !!