27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

ಬೆಳ್ತಂಗಡಿ: ಲಾಯಿಲ ಗ್ರಾಮದ 3 ನೇ ವಾರ್ಡ್ ಬೆಳ್ತಂಗಡಿ ಕಾಶಿಬೆಟ್ಟು ಬಳಿ ಕಳೆದ ಕೆಲವು ತಿಂಗಳಿಂದ ಈ ವ್ಯಾಪ್ತಿಯಲ್ಲಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಬರದಿಂದ ಸಾಗುತ್ತಿದ್ದು ಇದರಿಂದ ಕುಡಿಯುವ ನೀರಿನ ಪ್ರಮುಖ ಪೈಪ್ ಲೈನ್ ಹೊಂದಿರುವ ಪೈಪ್ ಒಡೆದು ಹೋಗಿ ಆಗಾಗ ತೊಂದರೆ ಆಗುತ್ತಿರುವ ನಡುವೆ. ಕಳೆದ ಒಂದು ವಾರಗಳ ಹಿಂದೆ ಅನಿರೀಕ್ಷಿತವಾಗಿ ವಾರ್ಡ್ ನ ಕೊಯ್ಯೂರು ಕ್ರಾಸ್, ಅಯೋಧ್ಯ ನಗರ, ಕುಳೆಂಜಿಲೋಡಿ ಮನೆಗಳಿಗೆ ನೀರು ಸರಬರಾಜು ಆಗುತ್ತಿದ್ದ ಕೊಳವೆ ಬಾವಿಯಿಂದ ಮಣ್ಣು ಮಿಶ್ರಿತ ನೀರು ಬರಲು ಪ್ರಾರಂಭ ಗೊಂಡು ಈ ವ್ಯಾಪ್ತಿಯ ಮನೆಗಳಿಗೆ ಕುಡಿಯಲು ನೀರು ಕೂಡ ದೊರಕದಂತ ಪರಿಸ್ಥಿತಿ ಉದ್ಭವಗೊಂಡಿದೆ. ಹೊಸ ಕೊಳವೆ ಬಾವಿ ಕೊರೆಸಲು ಇನ್ನಷ್ಟು ದಿನ ತಗುಲಲಿದ್ದು ಈಗಾಗಲೇ ಕೊರೆದಿರುವ ಇನ್ನೆರಡು ಕೊಳವೆ ಬಾವಿಯಲ್ಲಿ ನೀರು ಸಿಗದೆ ನಿಷ್ಪ್ರಯೋಜಕವಾಗಿದೆ ಇದನ್ನು ಮನಗಂಡ ಲಾಯಿಲ ಗ್ರಾಮದ 3 ನೇ ವಾರ್ಡ್ ಸದಸ್ಯರಾದ ಅರವಿಂದ್ ಕುಮಾರ್ ಮತ್ತು ಗಣೇಶ್ ಆರ್ ಸೇರಿ ಮನೆಗಳಿಗೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡಿದ್ದಾರೆ.

ಬೆಳ್ತಂಗಡಿ ಹಳೆ ಸೇತುವೆ ಬಳಿ ಹೊಸ ಸೇತುವೆ ಕಾಮಗಾರಿ ಪ್ರಾರಂಭಗೊಂಡ ಕಾರಣ ಸ್ಥಳೀಯ ಕೃಷಿ ಚಟುವಟಿಕೆಗೆ ಮತ್ತು ಕೆರೆ ಬಾವಿಗಳಿಗೆ ನೀರಿನ ವಸರು ಹೆಚ್ಚಾಗಲು ಹೊಳೆಬದಿ ಅಣೆಕಟ್ಟುಗೆ ಪ್ರತಿ ವರುಷ ಅಳವಡಿಸುತ್ತಿದ್ದ ಹಲಗೆಯನ್ನು ಈ ಬಾರಿ ಅಳವಡಿಸದ ಕಾರಣ ಈ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯೂ ತಲೆದುರಿದ್ದು ಇದರ ಪರಿಣಾಮ ಸ್ಥಳೀಯ ಕೊಳವೆ ಬಾವಿಯಲ್ಲಿ ಮತ್ತು ಕೆರೆ ,ಬಾವಿ ಗಳಲ್ಲಿ ನೀರಿನ ಪ್ರಮಾಣವು ಸಂಪೂರ್ಣ ಕಡಿಮೆ ಗೊಂಡಿದೆ.ಇದೇ ನೀರಿನ ಸಮಸ್ಯೆಯಿಂದ ಇಂದು ಅಯೋಧ್ಯ ನಗರ ಎಂಬಲ್ಲಿ ಕಳೆದ ಕೆಲವು ದಿನಗಳಿಂದ ನೀರಿಲ್ಲದೆ ಇರುವ ಮನೆಗಳಿಗೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಪ್ರಮುಖರಾದ ಅರವಿಂದ್ ಲಾಯಿಲ ಹಾಗೂ ಗಣೇಶ್ ಲಾಯಿಲ ಎಂಬವರು ಸೇರಿಕೊಂಡು ಸ್ವತಃ ಪೈಪ್ ತಂದು ಸರಕಾರಿ ಬಾವಿಯಿಂದ ನೀರನ್ನು ಪಂಪ್ ಮೂಲಕ ಮನೆ ಮನೆಗೆ ನೀರನ್ನು ತಲುಪಿಸಿ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮೆರೆದಿದ್ದಾರೆ.

ಬಾವಿಯಲ್ಲಿ ನೀರಿನ ಪ್ರಮಾಣವು ಕಡಿಮೆ ಇದ್ದರು ಕೆಲವು ಮನೆಗಳಿಗೆ ನೀರನ್ನು ನೀಡುವ ಯೋಜನೆ ಹಾಕಿಕೊಂಡಿದ್ದು ಇವರ ಈ ಕೆಲಸ ನೋಡಿ ಅಯೋಧ್ಯ ನಗರ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರಿಗೆ ಇವರ ಕೆಲಸ ಮಾದರಿ ಪ್ರತಿ ಗ್ರಾಮ ಪಂಚಾಯತ್ ಗೆ ಇಂತ ಸದಸ್ಯರು ಅಗತ್ಯವಿದೆ ಎಂದು ಸ್ಥಳೀಯ ನಿವಾಸಿ ಸುರೇಶ್ ಬರೆಮೇಲು ಇವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Related posts

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!