23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

ಬೆಳ್ತಂಗಡಿ: ಲಾಯಿಲ ಗ್ರಾಮದ 3 ನೇ ವಾರ್ಡ್ ಬೆಳ್ತಂಗಡಿ ಕಾಶಿಬೆಟ್ಟು ಬಳಿ ಕಳೆದ ಕೆಲವು ತಿಂಗಳಿಂದ ಈ ವ್ಯಾಪ್ತಿಯಲ್ಲಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಬರದಿಂದ ಸಾಗುತ್ತಿದ್ದು ಇದರಿಂದ ಕುಡಿಯುವ ನೀರಿನ ಪ್ರಮುಖ ಪೈಪ್ ಲೈನ್ ಹೊಂದಿರುವ ಪೈಪ್ ಒಡೆದು ಹೋಗಿ ಆಗಾಗ ತೊಂದರೆ ಆಗುತ್ತಿರುವ ನಡುವೆ. ಕಳೆದ ಒಂದು ವಾರಗಳ ಹಿಂದೆ ಅನಿರೀಕ್ಷಿತವಾಗಿ ವಾರ್ಡ್ ನ ಕೊಯ್ಯೂರು ಕ್ರಾಸ್, ಅಯೋಧ್ಯ ನಗರ, ಕುಳೆಂಜಿಲೋಡಿ ಮನೆಗಳಿಗೆ ನೀರು ಸರಬರಾಜು ಆಗುತ್ತಿದ್ದ ಕೊಳವೆ ಬಾವಿಯಿಂದ ಮಣ್ಣು ಮಿಶ್ರಿತ ನೀರು ಬರಲು ಪ್ರಾರಂಭ ಗೊಂಡು ಈ ವ್ಯಾಪ್ತಿಯ ಮನೆಗಳಿಗೆ ಕುಡಿಯಲು ನೀರು ಕೂಡ ದೊರಕದಂತ ಪರಿಸ್ಥಿತಿ ಉದ್ಭವಗೊಂಡಿದೆ. ಹೊಸ ಕೊಳವೆ ಬಾವಿ ಕೊರೆಸಲು ಇನ್ನಷ್ಟು ದಿನ ತಗುಲಲಿದ್ದು ಈಗಾಗಲೇ ಕೊರೆದಿರುವ ಇನ್ನೆರಡು ಕೊಳವೆ ಬಾವಿಯಲ್ಲಿ ನೀರು ಸಿಗದೆ ನಿಷ್ಪ್ರಯೋಜಕವಾಗಿದೆ ಇದನ್ನು ಮನಗಂಡ ಲಾಯಿಲ ಗ್ರಾಮದ 3 ನೇ ವಾರ್ಡ್ ಸದಸ್ಯರಾದ ಅರವಿಂದ್ ಕುಮಾರ್ ಮತ್ತು ಗಣೇಶ್ ಆರ್ ಸೇರಿ ಮನೆಗಳಿಗೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡಿದ್ದಾರೆ.

ಬೆಳ್ತಂಗಡಿ ಹಳೆ ಸೇತುವೆ ಬಳಿ ಹೊಸ ಸೇತುವೆ ಕಾಮಗಾರಿ ಪ್ರಾರಂಭಗೊಂಡ ಕಾರಣ ಸ್ಥಳೀಯ ಕೃಷಿ ಚಟುವಟಿಕೆಗೆ ಮತ್ತು ಕೆರೆ ಬಾವಿಗಳಿಗೆ ನೀರಿನ ವಸರು ಹೆಚ್ಚಾಗಲು ಹೊಳೆಬದಿ ಅಣೆಕಟ್ಟುಗೆ ಪ್ರತಿ ವರುಷ ಅಳವಡಿಸುತ್ತಿದ್ದ ಹಲಗೆಯನ್ನು ಈ ಬಾರಿ ಅಳವಡಿಸದ ಕಾರಣ ಈ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯೂ ತಲೆದುರಿದ್ದು ಇದರ ಪರಿಣಾಮ ಸ್ಥಳೀಯ ಕೊಳವೆ ಬಾವಿಯಲ್ಲಿ ಮತ್ತು ಕೆರೆ ,ಬಾವಿ ಗಳಲ್ಲಿ ನೀರಿನ ಪ್ರಮಾಣವು ಸಂಪೂರ್ಣ ಕಡಿಮೆ ಗೊಂಡಿದೆ.ಇದೇ ನೀರಿನ ಸಮಸ್ಯೆಯಿಂದ ಇಂದು ಅಯೋಧ್ಯ ನಗರ ಎಂಬಲ್ಲಿ ಕಳೆದ ಕೆಲವು ದಿನಗಳಿಂದ ನೀರಿಲ್ಲದೆ ಇರುವ ಮನೆಗಳಿಗೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಪ್ರಮುಖರಾದ ಅರವಿಂದ್ ಲಾಯಿಲ ಹಾಗೂ ಗಣೇಶ್ ಲಾಯಿಲ ಎಂಬವರು ಸೇರಿಕೊಂಡು ಸ್ವತಃ ಪೈಪ್ ತಂದು ಸರಕಾರಿ ಬಾವಿಯಿಂದ ನೀರನ್ನು ಪಂಪ್ ಮೂಲಕ ಮನೆ ಮನೆಗೆ ನೀರನ್ನು ತಲುಪಿಸಿ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮೆರೆದಿದ್ದಾರೆ.

ಬಾವಿಯಲ್ಲಿ ನೀರಿನ ಪ್ರಮಾಣವು ಕಡಿಮೆ ಇದ್ದರು ಕೆಲವು ಮನೆಗಳಿಗೆ ನೀರನ್ನು ನೀಡುವ ಯೋಜನೆ ಹಾಕಿಕೊಂಡಿದ್ದು ಇವರ ಈ ಕೆಲಸ ನೋಡಿ ಅಯೋಧ್ಯ ನಗರ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರಿಗೆ ಇವರ ಕೆಲಸ ಮಾದರಿ ಪ್ರತಿ ಗ್ರಾಮ ಪಂಚಾಯತ್ ಗೆ ಇಂತ ಸದಸ್ಯರು ಅಗತ್ಯವಿದೆ ಎಂದು ಸ್ಥಳೀಯ ನಿವಾಸಿ ಸುರೇಶ್ ಬರೆಮೇಲು ಇವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya
error: Content is protected !!