25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ.

ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ಫಾರ್ಮ್ ನಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡುತ್ತಿದ್ದು ನಿರಂತರ ಕೃಷಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಜೆಸಿಬಿ ಮೂಲಕ ಮಣ್ಣು ಅಗೆಯುವ ಸಂದರ್ಭದಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಸಿಕ್ಕಿರುವುದರಿಂದ ಜನರಲ್ಲಿ ಭಯ,ಭಕ್ತಿಯ ವಾತಾವರಣ ಸೃಷ್ಟಿಯಾಗಿದೆ.

ಈ ನಾಗ ಕಲ್ಲುಗಳು ಸಿಕ್ಕಿದ ಪ್ರದೇಶಕ್ಕೆ ರಾಕೇಶ್ ಹೆಗ್ಡೆಯವರು ಜ್ಯೋತಿಷ್ಯರನ್ನು ಕರೆ ತಂದಾಗ ಈ ಕಲ್ಲುಗಳು ಸುಮಾರು 400 ವರ್ಷಗಳ ಹಿಂದಿನ ಕಾಲದವು ಎಂದು ತಿಳಿಸಿದರು.

ನಮ್ಮ ಇಕೋ ಫಾರ್ಮ್ ನಲ್ಲಿ ನಾಗಬನವಿರುವುದರಿಂದ ಬರುವ ಬುಧವಾರ ನಾಗದೇವರಿಗೆ ಪೂಜೆಗಳು ನಡೆಯಲಿದ್ದು ಇದೀಗ ಮಣ್ಣು ಅಗೆಯುವಾಗ ನಾಗ ಕಲ್ಲು ಸಿಕ್ಕಿರುವುದು ನಮಗೆ ಅಚ್ಚರಿ, ಭಯ, ಭಕ್ತಿ ಮೂಡಿಸಿದೆ ಎಂದು ರಾಕೇಶ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya
error: Content is protected !!