23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ.

ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ಫಾರ್ಮ್ ನಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡುತ್ತಿದ್ದು ನಿರಂತರ ಕೃಷಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಜೆಸಿಬಿ ಮೂಲಕ ಮಣ್ಣು ಅಗೆಯುವ ಸಂದರ್ಭದಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಸಿಕ್ಕಿರುವುದರಿಂದ ಜನರಲ್ಲಿ ಭಯ,ಭಕ್ತಿಯ ವಾತಾವರಣ ಸೃಷ್ಟಿಯಾಗಿದೆ.

ಈ ನಾಗ ಕಲ್ಲುಗಳು ಸಿಕ್ಕಿದ ಪ್ರದೇಶಕ್ಕೆ ರಾಕೇಶ್ ಹೆಗ್ಡೆಯವರು ಜ್ಯೋತಿಷ್ಯರನ್ನು ಕರೆ ತಂದಾಗ ಈ ಕಲ್ಲುಗಳು ಸುಮಾರು 400 ವರ್ಷಗಳ ಹಿಂದಿನ ಕಾಲದವು ಎಂದು ತಿಳಿಸಿದರು.

ನಮ್ಮ ಇಕೋ ಫಾರ್ಮ್ ನಲ್ಲಿ ನಾಗಬನವಿರುವುದರಿಂದ ಬರುವ ಬುಧವಾರ ನಾಗದೇವರಿಗೆ ಪೂಜೆಗಳು ನಡೆಯಲಿದ್ದು ಇದೀಗ ಮಣ್ಣು ಅಗೆಯುವಾಗ ನಾಗ ಕಲ್ಲು ಸಿಕ್ಕಿರುವುದು ನಮಗೆ ಅಚ್ಚರಿ, ಭಯ, ಭಕ್ತಿ ಮೂಡಿಸಿದೆ ಎಂದು ರಾಕೇಶ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!