ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಗಳು, ಪತ್ರಕರ್ತರು, ಬರಹಗಾರರೂ ಆಗಿರುವ ಪ್ರೊ. ನಾವುಜಿರೆಯವರ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಪಾಂಡಿತ್ಯವುಳ್ಳವರಾಗಿ, ಉತ್ತಮ ಶಿಕ್ಷಕರು ಮತ್ತು ಅಧ್ಯಯನಶೀಲರು ಎಂದು ಹೆಸರು ಪಡೆದವರು. 1999ರಂದು ಮುಂಡಾಜೆಯಲ್ಲಿ ಜರಗಿದ ಬೆಳ್ತಂಗಡಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ತಾಲೂಕಿನ ಸಾಹಿತ್ಯ ಚಟುವಟಿಕೆಗಳಲ್ಲಿ, ಸಂಘಟನಾ ಕಾರ್ಯಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಂಡವರು ಎಂದು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತನ್ನ ಸಂತಾಪದ ನುಡಿಯಲ್ಲಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡರು ತಿಳಿಸಿದರು.

Leave a Comment

error: Content is protected !!