July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya
error: Content is protected !!