25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya
error: Content is protected !!