March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಹಾಗೂ ಊರ ಗ್ರಾಮಸ್ಥರಿಂದ ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಯಲ್ಲಿ ಪ್ರತಿಭಟನೆ ಮಾ.12 ರಂದು ನಡೆಯಿತು.

ಮಚ್ಚಿನ ಗ್ರಾಮ ಪಂಚಾಯತ್ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತಿಗೆ ಸೇರಿದ ಬಂಗೇರಕಟ್ಟೆ ನೆತ್ತರ ಜಂಟಿ ರಸ್ತೆಯು ತೀರ ಅದಕ್ಕೆಟ್ಟಿದ್ದು ಸಂಚಾರಕ್ಕೆ ಕಷ್ಟದ ಸ್ಥಿತಿಯಲ್ಲಿ ಇರುವ ಈ ರಸ್ತೆಯು ದುರಸ್ತಿ ಹಾಗೂ ಡಾಮಾರೀಕರಣಕ್ಕೆ, ದಾರಿದೀಪ ಚರಂಡಿ ದುರಸ್ತಿಗಳ ಬಗ್ಗೆ ಭಾಗ್ಯಶ್ರೀ ಮಿತ್ರ ಮಂಡಳಿ ಹಾಗೂ ಊರವರಿಂದ ನೆತ್ತರದಿಂದ ಮಚ್ಚಿನ ಮಡಂತ್ಯಾರು ಗ್ರಾಮ ಪಂಚಾಯತಿಗಳಿಗೆ ಕಾಲ್ನಡಿಗೆಯ ಮೂಲಕ ಪ್ರತಿಭಟನೆ ನಡೆಯಿತು.

ಭರವಸೆ ಒಂದೇ ಸಾಲದು ಅಭಿವೃದ್ಧಿಯೆಂದು ಸ್ವಾಮಿ?. ಕಣ್ಣು ಮುಚ್ಚಿ ಕೂತಿರುವ ಎರಡು ಗ್ರಾಮ ಪಂಚಾಯಿತಿಗಳ / ಜನಪ್ರತಿನಿಧಿಗಳ ಕಣ್ಣು ತೆರೆಯಲು ಈ ನಮ್ಮ ಪ್ರತಿಭಟನೆ. ಮನವಿಗೆ ಲೆಕ್ಕಿಸದ ಗ್ರಾಮ ಪಂಚಾಯಿತಿಗಳಿಗೆ ಬೆವರು ಸುರಿಸಿ ಕಾಲ್ನಡಿಗೆಯ ಈ ನಮ್ಮ ಪ್ರತಿಭಟನೆ. ಇದಕ್ಕೂ ಲೆಕ್ಕಿಸದೆ ಇದ್ದಲ್ಲಿ ರಕ್ತಸುರಿಸಿ ಪ್ರತಿಭಟನೆ ನಡೆಸೆ ನಡೆಸುತ್ತೇವೆ ಚುನಾವಣೆಗೆ ಮುನ್ನ ರಸ್ತೆಯ ಅಭಿವೃದ್ಧಿ ನಡೆಸದೆ ಇದ್ದಲ್ಲಿ ಸಂಘ ಸಂಸ್ಥೆ ಊರವರಿಂದ ಉಗ್ರ ಹೋರಾಟ ನಡೆಸುತ್ತೇವೆ ಎಂದು ಮನವಿ ಹಾಗೂ ಬ್ಯಾನರ್ ಗಳನ್ನು ಅಳವಡಿಸಲಾಯಿತು.

ಮನವಿಯನ್ನು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರಿಗೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಶ್ವನಾಥ ಪೂಜಾರಿ, ಗೋಪಾಲಕೃಷ್ಣ, ಕಿಶೋರ್ ಶೆಟ್ಟಿ, ಮಚ್ಚಿನ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಭಾಗ್ಯಶ್ರೀ ಮಿತ್ರ ಮಂಡಳಿಯ ಅಧ್ಯಕ್ಷರಾದ ಸಂತೋಷ್, ಕಾರ್ಯದರ್ಶಿ ಪ್ರಮೋದ್ ಕೋಡಿ, ಮಹಾಬಲ ನೆತ್ತರ, ಗೋಪಾಲ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಕೃಷ್ಣಪ್ಪ ಪೂಜಾರಿ, ಶಿವಪ್ಪ ಪೂಜಾರಿ, ಸದಸ್ಯರು ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!