July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಇಳಂತಿಲ : ಇಳಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಅಧ್ಯಕ್ಷತೆಯಲ್ಲಿ ನಾಡಗೀತೆಯೊಂದಿಗೆ ವಿಶೇಷ ಚೇತನರ ವಿಶೇಷ ಸಮನ್ವಯ ಗ್ರಾಮ ಸಭೆಯು ನಡೆಯಿತು.

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತ್ ನ ಗೌರವಾನ್ವಿತ ಸದಸ್ಯರು ಮತ್ತು ಪಂಚಾಯತ್ ನ ಕಾರ್ಯದರ್ಶಿ , CHO ಆದ ಶ್ರೀಮತಿ ಮಧುಶ್ರೀ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು , ವಿಪುಲ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಗ್ರಾಮ ಪಂಚಾಯತ್ ಉಜಿರೆ ಭಾಗವಹಿಸಿದ್ದರು.


ಗ್ರಾಮ ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಶ್ರೀಮತಿ ರಾಧಿಕಾ ಗ್ರಾಮ ಪಂಚಾಯತಿ ಇಳಂತಿಲ ಇವರು ಪ್ರಸ್ತಾವನೆ ಮತ್ತು ವರದಿಯನ್ನು ಮಂಡಿಸಿದರು. ನಂತರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಗ್ರಾಮ ಪಂಚಾಯತ್ ಉಜಿರೆ ಇವರು ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಅನೇಕ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿ 11 ಜನ ವಿಶೇಷ ಚೇತನರಿಗೆ ಆರೋಗ್ಯ ಕಾರ್ಡ್ ,2 ಜನ ವಿಶೇಷ ಚೇತನರಿಗೆ ಎಂಡೋ ಸಲ್ಫಾನ್ ಕಾರ್ಡ್, ಹಾಗೂ 01 ವಿಶೇಷ ಚೇತನ ಮಗುವಿಗೆ ವೈದ್ಯಕೀಯ ವೆಚ್ಚವನ್ನು ನೀಡಿದರು.


ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು , ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು , ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ವಿಶೇಷ ಚೇತನ ಬಂಧುಗಳು ಉಪಸ್ಥಿತರಿದ್ದರು. ಪಂಚಾಯತ್ ನ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!