30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Related posts

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya
error: Content is protected !!