ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Leave a Comment

error: Content is protected !!