23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Related posts

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!