23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ತೋಟತ್ತಾಡಿ ಇದರ ವತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟವು ಸಂಘದ ವಠಾರ ಕೃಷ್ಣ ನಗರದಲ್ಲಿ ಗ್ರಾಮದ ಗುರಿಕಾರರಾದ ಕೃಷ್ಣಪ್ಪ ಗೌಡ ಅಗರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣೆಪಾದೆ, ಚಾರ್ಮಾಡಿ ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ತೋಟತ್ತಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನಿರ್ದೇಶಕರಾದ ಜಯಂತಿ ಕುಶಾಲಪ್ಪ ಗೌಡ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಸುರೇಖಾ ಪ್ರಸಾದ್ ಮಡೀರು, ರಾಮಣ್ಣ ಗೌಡ ಏಡಿಯಾರು, ನೀಲಯ್ಯ ಗೌಡ ಮಡೀರು, ಕೃಷ್ಣಪ್ಪ ಗೌಡ ಜಾಕೇಡಿ ಉಪಸ್ಥಿತರಿದ್ದರು.

ಪುರುಷರಿಗೆ ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು.

ಸಂಜೆ ಸಮಾರೋಪ ಸಮಾರಂಭವು ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಗೌಡ ಮಡೀರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ, ಯುವ ವೇದಿಕೆ ಅಧ್ಯಕ್ಷರಾದ ನವೀನ್ ಗೌಡ ಬಾಯಿತ್ಯಾರು ಉಪಸ್ಥಿತರಿದ್ದರು.

Related posts

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!