25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ತೋಟತ್ತಾಡಿ ಇದರ ವತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟವು ಸಂಘದ ವಠಾರ ಕೃಷ್ಣ ನಗರದಲ್ಲಿ ಗ್ರಾಮದ ಗುರಿಕಾರರಾದ ಕೃಷ್ಣಪ್ಪ ಗೌಡ ಅಗರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣೆಪಾದೆ, ಚಾರ್ಮಾಡಿ ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ತೋಟತ್ತಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನಿರ್ದೇಶಕರಾದ ಜಯಂತಿ ಕುಶಾಲಪ್ಪ ಗೌಡ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಸುರೇಖಾ ಪ್ರಸಾದ್ ಮಡೀರು, ರಾಮಣ್ಣ ಗೌಡ ಏಡಿಯಾರು, ನೀಲಯ್ಯ ಗೌಡ ಮಡೀರು, ಕೃಷ್ಣಪ್ಪ ಗೌಡ ಜಾಕೇಡಿ ಉಪಸ್ಥಿತರಿದ್ದರು.

ಪುರುಷರಿಗೆ ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು.

ಸಂಜೆ ಸಮಾರೋಪ ಸಮಾರಂಭವು ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಗೌಡ ಮಡೀರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ, ಯುವ ವೇದಿಕೆ ಅಧ್ಯಕ್ಷರಾದ ನವೀನ್ ಗೌಡ ಬಾಯಿತ್ಯಾರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
error: Content is protected !!