25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya
error: Content is protected !!